ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.





ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm