ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm