ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm