ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am