ಬ್ರೇಕಿಂಗ್ ನ್ಯೂಸ್
28-05-21 01:28 pm Mangalore Correspondent ಕರಾವಳಿ
ಮಂಗಳೂರು, ಮೇ 28 : ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಸಿಗುವಂತೆ ಪರೀಕ್ಷೆ ಮತ್ತು ಸ್ಥಳದಲ್ಲಿಯೇ ಚಿಕಿತ್ಸೆ ನೀಡುವುದಕ್ಕಾಗಿ ಹಾಗೂ ಅವಶ್ಯಕತೆಯುಳ್ಳವರಿಗೆ ವೈದ್ಯಕೀಯ ಕಿಟ್ ಗಳನ್ನು ವಿತರಿಸುವುದು ಮುಂತಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲಿನಿಕ್ ಒಳಗೊಂಡ “ವೈದ್ಯರ ನಡೆ, ಹಳ್ಳಿಗಳ ಕಡೆ" ಎಂಬ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಮಾಡಿದ್ದಾರೆ.
ಸ್ಥಳೀಯ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ವ್ಯಕ್ತಿಗಳನ್ನು ಸಂದರ್ಶಿಸಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ತಪಾಸಣೆಗೆ ಒಳಪಡಿಸಲು ಸಂಚಾರಿ ಕ್ಲಿನಿಕ್ ತಂಡಕ್ಕೆ ಶಿಫಾರಸು ಮಾಡಬೇಕು. ಗ್ರಾಮದ ಪ್ರತಿ ನಾಗರಿಕರೂ ಕೋವಿಡ್ -19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ “ವೈದ್ಯರ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಪ್ರಾರಂಭಿಸಲು ಕನಿಷ್ಠ ಎರಡು ದಿನಗಳ ಮುಂಚಿತವಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡಬೇಕು. ಮೊಬೈಲ್ ಕ್ಲಿನಿಕ್ ವಾಹನವು ಪ್ರತಿ ದಿನವು 3 ರಿಂದ 4 ಹಳ್ಳಿಗಳಿಗೆ ಭೇಟಿ ನೀಡಿ, ಸ್ಥಳದಲ್ಲಿಯೇ ಕೋವಿಡ್ ತಪಾಸಣೆಯನ್ನು ಕೈಗೊಳ್ಳುವಂತೆ ಗುರಿ ನಿಗದಿಪಡಿಸಿ, ಮುಂದಿನ ಅವಧಿಯಲ್ಲಿ ಯಾವ ಗ್ರಾಮಕ್ಕೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಿಕೊಳ್ಳಬೇಕು.

ತಪಾಸಣೆ ಬಳಿಕ ರೋಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕೇ ಅಥವಾ ಹೋಂ ಐಸೊಲೇಶನ್ ನಲ್ಲಿರಬೇಕೇ ಎಂಬ ನಿರ್ಧಾರವನ್ನು ವೈದ್ಯರು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Every Village in Dakshina Kannada to have Covid-19 Doctors for testing said Mangalore DC Rajendra Kumar to spread the control of Virus.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm