ಬ್ರೇಕಿಂಗ್ ನ್ಯೂಸ್
29-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 29: ಉಳ್ಳಾಲದ ಕೋಡಿ ಬಳಿಯ ಸೇನೆರೆಬೈಲಿನಲ್ಲಿ ಸ್ಥಳೀಯರ ವಿರೋಧದ ಮಧ್ಯೆ ಭಾರೀ ಪೊಲೀಸ್ ಭದ್ರತೆಯಲ್ಲಿ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಏಳು ವರ್ಷಗಳ ಹಿಂದೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 70 ಕೋಟಿ ಅನುದಾನ ಬಿಡುಗಡೆಗೊಂಡು ನಗರದಾದ್ಯಂತ ಪೈಪ್ ಲೈನ್ ಅಳವಡಿಸಲಾಗಿತ್ತು. ಅದರಂತೆ, ನಗರ ವ್ಯಾಪ್ತಿಯ ಸೇಣೆರೆಬೈಲು, ಕಲ್ಲಾಪು, ಹೊಸಗದ್ದೆ ಎಂಬ ಮೂರು ಪ್ರದೇಶಗಳಲ್ಲಿ ದ್ರವ ತ್ಯಾಜ್ಯ ಸಂಸ್ಕರಣೆ ಮತ್ತು ಶುದ್ದೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸ್ಥಳೀಯ ನಿವಾಸಿಗಳು ದ್ರವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ಇದೀಗ ಸೇಣೆರೆಬೈಲಿನಲ್ಲಿ ಘಟಕ ನಿರ್ಮಾಣಕ್ಕೆ ಕೋರ್ಟ್ ಅವಕಾಶ ಕೊಟ್ಟಿದ್ದರಿಂದ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದ್ದು ಘಟಕವನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯ ಮುಖಂಡರ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿತ್ತು. ಆದರೆ ನಗರಸಭೆ ಅಧಿಕಾರಿಗಳು, ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸಿಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.



ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ದ್ರವತ್ಯಾಜ್ಯ ಶುದ್ಧೀಕರಿಸುವ ನಿಟ್ಟಿನಲ್ಲಿ ಸೇನರಬೈಲಿನಲ್ಲಿ ನೂತನ ಘಟಕ ನಿರ್ಮಿಸಲಾಗುತ್ತಿದೆ. ಆದರೆ, ಇದರಿಂದ ಆಗಬಹುದಾದ ತೊಂದರೆಗಳಿಂದ ಆತಂಕಕ್ಕೀಡಾಗಿರುವ ಸ್ಥಳೀಯ ನಿವಾಸಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಿಗದಿತ ಪ್ರದೇಶ ಜನವಸತಿಯಿಂದ ಕೂಡಿದ್ದು 300 ಮೀಟರ್ ಅಂತರದಲ್ಲಿ ಸುಮಾರು ಏಳು ಸಾವಿರ ಜನಸಂಖ್ಯೆ ಇದ್ದಾರೆ. ಮೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಆರು ಮಸೀದಿಗಳು, ಮೂರು ದೇವಸ್ಥಾನಗಳಿದ್ದು ಸ್ಥಳ ಗುರುತಿಸುವ ಸಂದರ್ಭ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿತ್ತು. ಈ ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಖಾನೆಗಳಿಂದ ಕಲುಷಿತ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಈಗಾಗಲೇ ಪರಿಸರ ಕಲುಷಿತಗೊಂಡಿದೆ. ಒಳಚರಂಡಿ ತ್ಯಾಜ್ಯ ಶುದ್ದೀಕರಣ ಘಟಕ ನಿರ್ಮಾಣಗೊಂಡರೆ ವಾಯು ಮಾಲಿನ್ಯ, ಪರಿಸರ ಮಾಲಿನ್ಯ ಹೆಚ್ಚಾಗಿ ದುರ್ವಾಸನೆಯಿಂದ ಚರ್ಮರೋಗ, ಸಾಂಕ್ರಾಮಿಕ ರೋಗ ಹರಡುವ ಅಪಾಯವಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm