ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.
ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm