ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am