ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am