ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am