ಬ್ರೇಕಿಂಗ್ ನ್ಯೂಸ್
05-06-21 05:54 pm Udupi Correspondent ಕರಾವಳಿ
ಕಾರ್ಕಳ, ಜೂನ್ 5: 85 ವರ್ಷದ ಅಜ್ಜಿಯನ್ನು ಸ್ವಂತ ಮಗನೇ ಮನೆಯಿಂದ ಹೊರಹಾಕಿದ್ದಲ್ಲದೆ, ಆಕೆಯ ಮೇಲೆ ಹಲ್ಲೆಗೈದ ಘಟನೆ ಕಾರ್ಕಳ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಗಮನಿಸಿ ಅಜ್ಜಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿನ ಅಶೋಕನಗರದ ಅಂಗನವಾಡಿಯ ಜಗಲಿಯಲ್ಲಿ ಅಜ್ಜಿ ಎರಡು ದಿನಗಳಿಂದ ಅನ್ನ ನೀರಿಲ್ಲದೆ ಮಲಗಿದ್ದರು. ತಲೆಯ ಭಾಗಕ್ಕೆ ಗಾಯಗೊಂಡಿದ್ದ ಅಜ್ಜಿಯನ್ನು ಗಮನಿಸಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಂಬವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಜ್ಜಿಯನ್ನು ಯಶೋದಾ ಆಚಾರ್ಯ (85) ಎಂದು ಗುರುತಿಸಲಾಗಿದ್ದು, ಆಕೆಯ ಮಗನೇ ಮನೆಯಿಂದ ಹೊರಹಾಕಿದ್ದಾನೆ ಎನ್ನಲಾಗುತ್ತಿದೆ.

ರಮಿತಾ ಕೋವಿಡ್ ಆಹಾರದ ಕಿಟ್ ನೀಡುವುದಕ್ಕಾಗಿ ಮನೆ ಪರಿಸರಕ್ಕೆ ಬಂದಿದ್ದಾಗ, ಅಜ್ಜಿಯನ್ನು ಹೊರಗೆ ಹಾಕಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಈ ಬಗ್ಗೆ ಮನೆಯಲ್ಲಿ ಕೇಳಿದಾಗ ಸ್ವಂತ ಮಗನೇ ತಾಯಿಯನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾನೆಂದು ತಿಳಿದುಬಂದಿದೆ. ಹೀಗಾಗಿ ಅಜ್ಜಿಯನ್ನು ಆಸ್ಪತ್ರೆಗೆ ಸೇರಿಸಿದ್ದಲ್ಲದೆ, ಒಂದಷ್ಟು ಬಟ್ಟೆಯನ್ನೂ ತೆಗೆದುಕೊಟ್ಟಿದ್ದಾರೆ. ಯಶೋಧಾ ಅವರ ಗಂಡ ಶೀನ ಆಚಾರ್ಯ ಐದು ವರ್ಷಗಳ ಹಿಂದೆ ನಿಧನರಾಗಿದ್ದು ಆಬಳಿಕ ಮಗನ ಜೊತೆ ವಾಸವಿದ್ದರು.
ಅಜ್ಜಿ ಯಶೋಧಾ ಹೇಳುವ ಪ್ರಕಾರ, ಮನೆಯಲ್ಲಿ ಮಗ ಮತ್ತು ಸೊಸೆ ಹೊಡೆಯುತ್ತಿದ್ದರಂತೆ. ಕಟ್ಟಿಗೆಯಲ್ಲಿ ಹೊಡೆದಿದ್ದರಿಂದ ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ, ಮಗ ತಾಯಿಗೆ ಹೊಡೆದಿರುವುದನ್ನು ನಿರಾಕರಿಸಿದ್ದಾನೆ. ತಾಯಿ ಮಾನಸಿಕವಾಗಿ ಸ್ಥಿಮಿತ ಕಳಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದಿದ್ದು, ಅದರಿಂದ ತಲೆಗೆ ಪೆಟ್ಟಾಗಿದೆ. ಅಷ್ಟೇನು ದೊಡ್ಡ ಗಾಯ ಆಗಿಲ್ಲದ ಕಾರಣ ಆಸ್ಪತ್ರೆಗೆ ತೋರಿಸಿಲ್ಲ ಎಂದಿದ್ದಾನೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ತಾಯಿ ಮೇಲೆ ಹಲ್ಲೆಗೈದ ಬಗ್ಗೆ ಮಗನ ವಿರುದ್ಧ ಕೇಸು ದಾಖಲಾಗಿದೆ.
In a heartless act, a son did not take his 85-year-old mother, who had received grievous injuries to her head, for medical treatment. A social worker came to the rescue of the elderly woman and got her admitted to the government hospital of the taluk.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm