ಬ್ರೇಕಿಂಗ್ ನ್ಯೂಸ್
05-06-21 07:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಜೂನ್ 5ರಂದು ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವೆಂದು ಆಚರಣೆ ಮಾಡಲಾಗುತ್ತಿದೆ. ಕೆಲವು ಕಡೆ ಪರಿಸರ ಉಳಿಸುವ ನಿಟ್ಟಿನಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜಕಾರಣಿಗಳು ಪರಿಸರದ ಬಗ್ಗೆ ಭಾಷಣ ಮಾಡುತ್ತಿದ್ದಾರೆ. ಇವೆಲ್ಲದರ ಮಧ್ಯೆ ಮಂಗಳೂರು ನಗರದ ಬಿಜೈನಲ್ಲಿ ಬೃಹತ್ ಮರಗಳನ್ನು ಪರಿಸರ ದಿನದಂದೇ ಕಡಿದು ನೆಲಕ್ಕುರುಳಿಸಲಾಗಿದೆ.
ಬಿಜೈ ನ್ಯೂರೋಡ್ ಕೊನೆಯ ಭಾಗದಲ್ಲಿ ರಸ್ತೆ ಅಗಲೀಕರಣದ ಕೆಲಸ ನಡೆಯುತ್ತಿದ್ದು, ಬೃಹತ್ ಮಾವಿನ ಮರಗಳನ್ನು ಕಡಿದು ಹಾಕಲಾಗಿದೆ. ಪರಿಸರದ ಬಗ್ಗೆ ಪಾಠ ಮಾಡುವ ಹೊತ್ತಿನಲ್ಲೇ ನೆಲಕ್ಕುರುಳಿ ಬಿದ್ದ ಮರಗಳು ರೋದಿಸಲಾರಂಭಿಸಿವೆ. ಇದೇನಾ ಪರಿಸರ ದಿನಾಚರಣೆ ಎಂದು ಮನುಷ್ಯನ ದುರ್ವರ್ತನೆಯ ಬಗ್ಗೆ ಸದ್ದಿಲ್ಲದೆ ಕಣ್ಣೀರು ಹಾಕುತ್ತಿದೆ.


ಬಿಜೈ ನ್ಯೂರೋಡ್ ನಲ್ಲಿ ರಸ್ತೆ ಬದಿಯ ಮರಗಳನ್ನು ನಿರ್ದಾಕ್ಷಿಣ್ಯವಾಗಿ ಕಡಿದು ಹಾಕಲೇ ಬೇಕಂತಿರಲಿಲ್ಲ. ಅದನ್ನು ಉಳಿಸಿಕೊಂಡೇ ರಸ್ತೆ ಅಗಲೀಕರಣ ಮಾಡುವ ಸಾಧ್ಯತೆಗಳೂ ಇದ್ದವು. ಬೆಂಗಳೂರಿನಲ್ಲಿ ರಸ್ತೆ ಬದಿಯ ಮರಗಳನ್ನು ಕಟ್ಟಡಗಳ ಎಡೆಯಲ್ಲೂ ಉಳಿಸಿಕೊಂಡಿರುವ ಉದಾಹರಣೆಗಳು ಬಹಳಷ್ಟಿದೆ. ಮಂಗಳೂರು ನಗರದಲ್ಲಿ ಹಿಂದಿನ ಕಾಲದಲ್ಲಿ ರಸ್ತೆ ಬದಿ ಉದ್ದಕ್ಕೆ ನೆಟ್ಟು ಬೆಳೆಸಿದ್ದ ಮರಗಳು ಈಗ ಕಾಂಕ್ರೀಟ್ ರಸ್ತೆಯ ಹಾವಳಿಯಿಂದಾಗಿ ಸರದಿಯಂತೆ ಮನುಷ್ಯನ ರಕ್ತದಾಹಕ್ಕೆ ಬಲಿಯಾಗುತ್ತಲೇ ಇದೆ.
ಬಂಟ್ಸ್ ಹಾಸ್ಟೆಲಿನಲ್ಲಿ ಎರಡು ವರ್ಷಗಳ ಹಿಂದೆ ಬೃಹತ್ ಅಶ್ವತ್ಥ ಮರವನ್ನು ಕಡಿದು ಹಾಕುವ ಹುನ್ನಾರ ನಡೆದಾಗ, ಬಜರಂಗದಳದವರು ಆಕ್ಷೇಪಿಸಿದರೆಂದು ಅದನ್ನು ಬುಡದಿಂದಲೇ ಕಿತ್ತು ಸಿ.ವಿ.ನಾಯಕ್ ಹಾಲ್ ಮುಂಭಾಗದಲ್ಲಿ ನೆಡುವ ನಾಟಕ ನಡೆದಿತ್ತು. ಬೃಹತ್ ಮರಗಳನ್ನು ನೆಟ್ಟ ಮಾತ್ರಕ್ಕೆ ಬದುಕುವುದಿಲ್ಲ. ಒಂದು ವರ್ಷ ಕಾಲ ಹಸಿರು ಚಿಗುರಿ ನಿಂತಿದ್ದ ಮರ ನಂತರದ ವರ್ಷದಲ್ಲಿ ಪೋಷಣೆಯಿಲ್ಲದೆ ಸೊರಗಿತ್ತು. ಈ ಬಾರಿ ಸತ್ತೇ ಹೋಗಿದೆ. ಆದರೆ, ಬಂಟ್ಸ್ ಹಾಸ್ಟೆಲಿನಲ್ಲಿ ಎಸಿ ಗಾಳಿಯನ್ನು ಕೊಡುತ್ತಿದ್ದ ಅಶ್ವತ್ಥ ಮರದ ಆಸರೆ ಅನುಭವಿಸಿದವರು ಅದನ್ನು ಮರೆಯಲು ಸಾಧ್ಯವೇ ?


ಮರಗಳಿದ್ದರೆ ಮಾತ್ರ ಮನುಷ್ಯ ಎಂಬ ಅರಿವು ಬರದೆ ಕಾಂಕ್ರೀಟ್ ಕಾಡು ಕಟ್ಟುತ್ತ ಹೋದ ಮಾತ್ರಕ್ಕೆ ಪರಿಸರ ದಿನಕ್ಕೆ ಅರ್ಥ ಬರುವುದೇ ಮಹಾನಗರ ಪಾಲಿಕೆಯವರೇ ? ಪರಿಸರ ದಿನದಂದೇ ಮರಗಳ ಬುಡಕ್ಕೆ ಕೊಡಲಿಯಿಕ್ಕಿದವರು ಗಿಡಗಳನ್ನು ನೆಟ್ಟು ಬೆಳೆಸಿಯಾರೇ ?
A huge mango tree gets an axe on the pretext of road widening on Bejai New Road in Mangalore. Ironically, this happened on a day when politicians and bureaucrats were seen shouting their lungs out from pulpit about tree protection on Environment day 2021
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm