ಬ್ರೇಕಿಂಗ್ ನ್ಯೂಸ್
06-06-21 09:17 pm Mangaluru Correspondent ಕರಾವಳಿ
ಉಳ್ಳಾಲ, ಜೂ.6: ಹಳೆ ದ್ವೇಷದಲ್ಲಿ ಉಳ್ಳಾಲ ಪೊಲೀಸರು ತನಗೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಉಳ್ಳಾಲದ ಯುವಕನೋರ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾನೆ.
ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಶವ್ವನ್ (25) ತನಗೆ ಉಳ್ಳಾಲ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂದು ದೂರಿದ ಯುವಕ. ಶವ್ವಾನ್ ಸಹೋದರ ಸಫ್ವಾನ್ ವಿಚಾರದಲ್ಲಿ ಮಾಹಿತಿ ಪಡೆಯಲೆಂದು ಉಳ್ಳಾಲದ ಇನ್ ಲ್ಯಾಂಡ್ ಪ್ಲಾಟಿನ ಆರನೇ ಮಹಡಿಗೆ ಕರೆಸಿಕೊಂಡಿದ್ದ ಪೊಲೀಸ್ ಸಿಬಂದಿ ರಂಜಿತ್ ಹಾಗೂ ಮತ್ತೊಬ್ಬ ಪೊಲೀಸ್ ಕಾನ್ ಸ್ಟೇಬಲ್ ಏಕಾಏಕಿ ನನ್ನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಅಲ್ಲಿಗೆ ಉಳ್ಳಾಲ ಠಾಣೆ ಎಸ್ಸೈ ಪ್ರದೀಪ್ ಅವರನ್ನು ಕರೆಸಿಕೊಂಡಿದ್ದು ಅವರು ಕೂಡಾ ನನಗೆ ಥಳಿಸಿದ್ದು ಬಳಿಕ ನನ್ನ ಮೊಬೈಲ್ ಫೋನ್ ಕಿತ್ತುಕೊಂಡು ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ನಿನ್ನ ತಮ್ಮ ಸಫ್ವಾನ್ ಎಲ್ಲಿದ್ದಾನೆ, ಅವನನ್ನು ಕೂಡಲೇ ಠಾಣೆಗೆ ಕರೆದುಕೊಂಡು ಬರಬೇಕು, ನೀವು ಇಬ್ಬರು ಸೇರಿ, ನಮ್ಮ ಪೊಲೀಸ್ ಜೀಪಿಗೆ ಕಲ್ಲು ಎಸೆದಿದ್ದೀರಿ ಎಂದು ನನಗೆ ಬೂಟು ಕಾಲಿನಿಂದ ಹೊಡೆದಿದ್ದಾರೆ ಎಂದು ಶವ್ವನ್ ಆರೋಪಿಸಿದ್ದಾರೆ. ಪೊಲೀಸ್ ಜೀಪಿಗೆ ಕಲ್ಲು ಎಸೆದ ಕುರಿತು ನನಗೆ ಮಾಹಿತಿ ಇಲ್ಲವೆಂದು ಪೊಲೀಸರಲ್ಲಿ ಪರಿಪರಿಯಾಗಿ ಬೇಡಿಕೊಂಡಿದ್ದೆ. ನಾನು ನಿರಪರಾಧಿ ಎಂದು ಅವರಿಗೆ ಗೊತ್ತಿದ್ದರೂ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನಗೆ ಹಲ್ಲೆ ನಡೆಸಿದವರಲ್ಲಿ ಎಸ್ಐ ಪ್ರದೀಪ್, ಸಿಬಂದಿ ಆಗಿರುವ ಅಕ್ಬರ್, ಸಾಗರ್, ರಂಜಿತ್, ರವಿ, ಮತ್ತೊಬ್ಬರು ಎಸ್ಐ ಹಾಗೂ ಇಬ್ಬರು ಪೊಲೀಸರಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನನ್ನನ್ನು ವಶಕ್ಕೆ ತೆಗೆದುಕೊಂಡ ದಿನ ಎಸ್ಐ ಪ್ರದೀಪ್ ನೇತೃತ್ವದ ಆರು ಮಂದಿ ಪೊಲೀಸರು ನಮ್ಮ ಮನೆಗೆ ನುಗ್ಗಿ ನನ್ನ ತಂದೆ, ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ತಮ್ಮನನ್ನು ಬೆಳಗ್ಗೆ ಠಾಣೆಗೆ ಕರೆದುಕೊಂಡು ಬರುತ್ತೇನೆ ಎಂದು ತಂದೆ ಹೇಳಿದಾಗ ವಾಪಸ್ ಮರಳಿದ್ದಾರೆ. ನನ್ನ ತಮ್ಮ ಸಫ್ವಾನ್ ನನ್ನು ತಂದೆಯೇ ಮರುದಿವಸ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಒಪ್ಪಿಸಿದ್ದು ಬಳಿಕ ರಾತ್ರಿ 10.30 ಗಂಟೆಗೆ ನನ್ನನ್ನ ಬಿಟ್ಟಿರುತ್ತಾರೆ.
ಏನು ತಪ್ಪು ಮಾಡದ ನನಗೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ನನಗೆ ಮಲಮೂತ್ರ ವಿಸರ್ಜನೆ ಕಷ್ಟವಾಗಿ ನೇತಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತೇನೆ. ಈ ಹಿಂದೆ ನನ್ನ ಮತ್ತೊಬ್ಬ ತಮ್ಮ ಸಾದಿನ್ ನನ್ನು ಪಾಸ್ಪೋರ್ಟ್ ವಿಚಾರದಲ್ಲಿ ಪೊಲೀಸರು ಅನ್ಯಾಯವೆಸಗಿದ್ದು ಹಳೆಯ ದ್ವೇಷವನ್ನು ಇಟ್ಟುಕೊಂಡು ನನ್ನ ಮೇಲೆ ಹಲ್ಲೆ ನಡೆಸಿರುತ್ತಾರೆ.
ಆತನಿಂದ ಪಾಸ್ಪೋರ್ಟ್ ಕಿತ್ತುಕೊಂಡಿದ್ದ ಪೊಲೀಸರು ಮತ್ತೆ ಕಮಿಷನರ್ ಮೂಲಕ ಪಾಸ್ಪೋರ್ಟ್ ಪಡೆದುಕೊಂಡಾಗ ನಿನ್ನನ್ನು ಎನ್ ಕೌಂಟರಲ್ಲಿ ಮುಗಿಸುತ್ತೇನೆ ಎಂದು ತಮ್ಮನನ್ನು ಬೆದರಿಸಿದ್ದರು. ನನ್ನ ಕುಟುಂಬದ ಮೇಲಿನ ಹಳೆಯ ದ್ವೇಷದಿಂದ ನಮ್ಮ ಮೇಲೆ ಇಂತಹ ಕೃತ್ಯ ನಡೆಸುತ್ತಿದ್ದು ಕಮಿಷನರ್ ಅವರು ಹಲ್ಲೆಗೈದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸುತ್ತಿದ್ದೇವೆ ಎಂದು ಶವ್ವನ್ ವಿನಂತಿಸಿದ್ದಾರೆ.
25-year-old Youth has approached the Mangalore Commissioner of Police Shashi Kumar and filed a complaint alleging Police Atrocity by Ullal Police.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm