ಬ್ರೇಕಿಂಗ್ ನ್ಯೂಸ್
09-06-21 10:41 pm Mangaluru Correspondent ಕರಾವಳಿ
ಮಂಗಳೂರು, ಜೂನ್ 9: ಸುರತ್ಕಲ್ ಸಮೀಪದ ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಭತ್ತದ ಬೀಜಗಳು ಮೊಳಕೆ ಹಂತದಲ್ಲಿ ಸುಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ ನೀರು ಇದಕ್ಕೆ ಕಾರಣ ಎಂದು ಸ್ಥಳೀಯರು ಭೀತಿ ವ್ಯಕ್ತಪಡಿಸಿದ್ದಾರೆ.
ಬೊಳ್ಳಾರ ಗುತ್ತಿನ ಪ್ರಕಾಶ್ ಶೆಟ್ಟಿ ಎಂಬವರು ಕೃಷಿ ಇಲಾಖೆಯಿಂದ ಪಡೆದ ಭತ್ತವನ್ನು ಮೊಳಕೆ ಬರಿಸಿ ಬಿತ್ತನೆ ಮಾಡಿದ್ದರು. ಇನ್ನೋರ್ವ ರೈತ ತಾವೇ ಸಿದ್ಧಪಡಿಸಿದ ಭತ್ತವನ್ನು ಮೊಳಕೆ ಬರಿಸಿ ಗದ್ದೆಯಲ್ಲಿ ಬಿತ್ತಿದ್ದರು. ಇಬ್ಬರು ರೈತರು ಬಿತ್ತಿದ ಬೀಜವೂ ಸುಟ್ಟು ಹೋಗಿದ್ದು ಕಪ್ಪಾಗಿ ಹೋಗಿದೆ.

ಎಂಆರ್ ಪಿಎಲ್ ಬಳಿಯ ಮೂಡುಪದವು ಸಮೀಪ ಒಸರುವ ತ್ಯಾಜ್ಯ ನೀರು ಕುತ್ತೆತ್ತೂರು ಮೂಲಕ ಹರಿದು ಸೂರಿಂಜೆಗೆ ಬರುತ್ತದೆ. ಇದರ ಪರಿಣಾಮ ಈ ಭಾಗದಲ್ಲಿ ಕೃಷಿಗೆ ತೊಂದರೆಯಾಗಿ ರೈತರು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ. ಈಗ ಸೂರಿಂಜೆಯ ರೈತರು ಮಾಡಿದ ಕೃಷಿ ಸುಟ್ಟು ಹೋಗಿದ್ದು ಹಾಳಾಗಿದೆ.
ಇತ್ತೀಚೆಗೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಳದ ಬಳಿ ನೀರಿನಲ್ಲಿ ತೈಲದ ಅಂಶ ಕಂಡುಬಂದಿದ್ದು, ಬಾವಿ, ಕೆರೆಯ ಮೀನುಗಳು ಸತ್ತಿದ್ದವು. ಇಲ್ಲಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆದರೆ ಅದರ ಫಲಿತಾಂಶ ಇನ್ನೂ ಜನತೆಗೆ ತಿಳಿದಿಲ್ಲ ಎಂಬ ಅಸಮಾಧಾನವನ್ನು ರೈತರು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳಲ್ಲಿ ಕೇಳಿದರೆ ತಮಗೇನೂ ಗೊತ್ತಿಲ್ಲ ಎಂದು ನುಣುಚಿಕೊಳ್ಳುತ್ತಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯ ಕೃಷಿಕರಿಗೆ ಹಾನಿಯಾಗುತ್ತಿರುವ ಬಗ್ಗೆ ಪಂಚಾಯತ್ ನಲ್ಲಿ ಹೇಳಿಕೊಂಡರೂ, ಕೈಗಾರಿಕೆಯ ಮಾಲಿನ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಂಚಾಯತ್ ಅಧಿಕಾರಿಗಳ ಈ ರೀತಿಯ ನಿರ್ಲಕ್ಷ್ಯದಿಂದಾಗಿಯೇ ಎಂಆರ್ ಪಿಎಲ್ ಸೊಕ್ಕು ತೋರಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
MRPL Dump dirty wastewater Crops Burnt in Mangalore. The Pictures of this has gone viral on Social Media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm