ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.


ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm