ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm