ಬ್ರೇಕಿಂಗ್ ನ್ಯೂಸ್
12-06-21 04:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಅಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿಯಲ್ಲಿರುವ ಮಂದಿಗೆ ರಾಜ್ಯ ಸರಕಾರದ ಪರಿಹಾರ ಪ್ಯಾಕೇಜ್ ಕೈಗೆಟಕದಂತಾಗಿದೆ. ಟೈಲರ್ ಕೆಲಸ ಮಾಡುವ ಮಂದಿ ತಾವು ಅಸಂಘಟಿತ ಕಾರ್ಮಿಕರು ಎಂದು ತೋರಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ತೆರಳಿದರೆ, ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲೇ ಕೆಲಸ ಮಾಡುವುದಾಗಿ ಹೇಳಿದರೂ ವಾಪಸ್ ಕಳುಹಿಸುತ್ತಾರೆ. ಇದರಿಂದಾಗಿ ಟೈಲರ್ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಅನ್ನೋದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು ಈ ಕುರಿತ ಗೊಂದಲವನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಸರಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೋವಿಡ್ನಿಂದಾಗಿ ಟೈಲರ್ಗಳು ಅಂಗಡಿ ಬಾಗಿಲು ತೆರೆಯದೆ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ಎರಡು ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ತಪ್ಪು. ಇದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ. ಸರಕಾರ ಈ ನಿಯಮವನ್ನು ಕೈಬಿಟ್ಟು ಎಲ್ಲಾ ಟೈಲರ್ ಗಳಿಗೂ ಪ್ಯಾಕೇಜ್ ಮೊತ್ತ ನೀಡುವಂತೆ ಅವರು ಒತ್ತಾಯಿಸಿದರು.
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ (ಕೆಎಸ್ಟಿಎ) ಕಳೆದ 21 ವರ್ಷಗಳಿಂದ ಟೈಲರ್ ವೃತ್ತಿಯವರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಸಂಘವನ್ನು ವಿಶ್ವಾಸಕ್ಕೆ ಪಡೆದು ಸಂಘಟನೆಯ ಗುರುತು ಕಾರ್ಡ್ ತೋರಿಸಿದರೆ ಅಧಿಕಾರಿಗಳು ಮಾನ್ಯತೆ ನೀಡಿ, ಪ್ಯಾಕೇಜ್ ಮೊತ್ತ ಪಡೆಯಲು ಸಹಕರಿಸಬೇಕು. ಈ ಬಗ್ಗೆ ಸರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಕೆಎಸ್ ಟಿಎ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮಾತನಾಡಿ, ಸರಕಾರ ಟೈಲರ್ಗಳಿಗೆ ಘೋಷಿಸಿರುವ ಪ್ಯಾಕೇಜ್ ಮೊತ್ತವನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕೆಎಸ್ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.
Mangalore No govt package for tailors association slams govt. We request the govt to consider us as categories of people who are also in distress on account of lockdown.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm