ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm