ಬ್ರೇಕಿಂಗ್ ನ್ಯೂಸ್
14-06-21 11:49 am Mangalore Correspondent ಕರಾವಳಿ
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 17 ಗ್ರಾಮ ಪಂಚಾಯತ್ ಗಳನ್ನು ಜೂನ್ 14 ರಿಂದ ಜೂನ್ 21ರ ವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಪಾಸಿಟಿವ್ ದರ ಕಡಿಮೆ ಮಾಡುವ ಉದ್ದೇಶದಿಂದ 50ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯತಿಗಳ ಬಗ್ಗೆ ಟಾಸ್ಕ್ಫೋರ್ಸ್ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಜೂನ್ 21ರ ಬೆಳಗ್ಗೆ 9 ಗಂಟೆ ವರೆಗೆ ಏಳು ದಿನಗಳ ಕಾಲ 17 ಗ್ರಾಪಂಗಳಲ್ಲಿ ಸೀಲ್ಡೌನ್ ಇರಲಿದೆ. ಈ ವೇಳೆ ಗ್ರಾಮಗಳಿಗೆ ಹೊರಗಿನ ಯಾರು ಕೂಡ ಬರುವಂತಿಲ್ಲ. ಜೊತೆಗೆ ಗ್ರಾಮದಿಂದ ಹೊರ ಹೊಗುವುದನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಕೆಎಂಎಫ್ ಹಾಲಿನ ಬೂತ್, ಪೆಟ್ರೋಲ್ ಬಂಕ್ ತೆರೆಯಲು ಮತ್ತು ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ.

ಮಂಗಳೂರು ತಾಲೂಕಿನ ನೀರುಮಾರ್ಗ ಮತ್ತು ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೆಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯ್ಲ, ಉಜಿರೆ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಗ್ರಾಮ ಪಂಚಾಯತಿಗಳು ಜಿಲ್ಲಾಧಿಕಾರಿ ಆದೇಶದಂತೆ ಸೀಲ್ ಡೌನ್ ಆಗಲಿದೆ.
Complete seal down will be enforced in 17-gram panchayats of Dakshina Kannada district from June 14 to 21. The gram panchayats where there are more than 50 active Covid-19 cases will go for complete seal down.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am