ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm