ಬ್ರೇಕಿಂಗ್ ನ್ಯೂಸ್
17-06-21 01:36 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.17: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ವಿರುದ್ಧ ಮೂರು ತಿಂಗಳ ಜೈಲು ಶಿಕ್ಷೆ ಆದೇಶವನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟ ಮೂಲ ದಾವೆ ನಂಬರ್ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಮತ್ತು ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರು ಹಾಗೂ ಸಂಸ್ಥೆಗಳ ಗೌರವಕ್ಕೆ ಹಾನಿಯಾಗುವ ಹೇಳಿಕೆ ಅಥವಾ ಆರೋಪ ಮಾಡದಂತೆ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿತ್ತು. ಈ ಆದೇಶ ಪದೇ ಪದೆ ಉಲ್ಲಂಘನೆಯಾಗುತ್ತಿದ್ದ ಕಾರಣ ಮತ್ತೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಹಿಂದೆ ಎರಡು ಬಾರಿ ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದರ ವಿರುದ್ಧ ಸೋಮನಾಥ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರಕರಣದ ಹೆಚ್ಚುವರಿ ತನಿಖೆಗೆ ಮೂಲ ಕೋರ್ಟ್ಗೆ ಅರ್ಜಿ ರವಾನಿಸಲ್ಪಟ್ಟಿತ್ತು.

ಈ ಸಂಬಂಧ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಜೂ.8ರಂದು ಅಂತಿಮ ಆದೇಶ ಹೊರಡಿಸಿ, ಹಿಂದಿನ ತೀರ್ಪನ್ನೇ ಪುನರುಚ್ಚರಿಸಿದ್ದಾರೆ. ಮೂರು ತಿಂಗಳ ಜೈಲು ಶಿಕ್ಷೆ ಅಲ್ಲದೆ ಸೋಮನಾಥ ನಾಯಕ್ ಗೆ ಸೇರಿದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿ ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರ ನೀಡಬೇಕು. ಪ್ರಕರಣದಲ್ಲಿ ಕೋರ್ಟ್ ಅವಧಿ ದುರುಪಯೋಗಪಡಿಸಿ ಮತ್ತೆ ಶ್ರೀ ಕ್ಷೇತ್ರಕ್ಕೆ ಉಪಟಳ ನೀಡಿದ್ದಕ್ಕೆ ಹೆಚ್ಚುವರಿ ಪರಿಹಾರವಾಗಿ 2,000 ರು. ನೀಡುವಂತೆಯೂ ಆದೇಶಿಸಿದೆ ಎಂದು ಎ.ವಿ. ಶೆಟ್ಟಿ ಧರ್ಮಸ್ಥಳದ ಪರವಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Belthanagady Nagarika Trust President Somanath sentenced to months in jail for damaging Dharmasthala Hedges's family name.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm