ಬ್ರೇಕಿಂಗ್ ನ್ಯೂಸ್
17-06-21 11:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 17: ಶಾಸಕರು ಶಾಸಕಾಂಗ ಸಭೆ ಕರೆಯಿರಿ ಎಂದರೆ ಕೊರೊನಾ ನಿಯಮ ಎಂದು ನಿರಾಕರಿಸುತ್ತಾರೆ. ಆದರೆ ಈಗ ಅಧಿಕಾರಕ್ಕಾಗಿ ಸಭೆ ಸೇರಿ ಕಚ್ಚಾಟ ನಡೆಸುತ್ತಾರೆ. ಹೀಗೆ ಸಭೆ ಸೇರಿದರೆ ಕೋವಿಡ್ ನಿಯಮ ಅನ್ವಯ ಆಗಲ್ವಾ ಎಂದು ಮಾಜಿ ಸಚಿವ ಯು.ಟಿ. ಖಾದರ್ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯು.ಟಿ. ಖಾದರ್, ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ರಾಜ್ಯದ ಜನರಿಗೆ ದ್ರೋಹವಾಗುತ್ತಿದೆ. ಜನರಿಗೆ ದ್ರೋಹ ಎಸಗುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆಯಿಲ್ಲ. ಕೋವಿಡ್ ನಿಯಂತ್ರಣಕ್ಕೆ ಸಭೆ ಕರೆದಿಲ್ಲ. ಶಾಸಕರು ಸಭೆ ಕರೆಯಿರಿ ಎಂದು ಹೇಳಿದರೆ ಕೊರೊನಾ ನಿಯಮ ಎಂದು ಹೇಳುತ್ತಾರೆ. ಆದರೆ ಈಗ ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ನಿಯಮ ಅನ್ವಯ ಆಗಲ್ವೇ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ನಡವಳಿಕೆಯಿಂದ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದ ಗೌರವ, ಘನತೆಗೆ ಧಕ್ಕೆ ಒದಗಿದೆ. ಸರ್ಕಾರ ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗಲಾದರೂ ಜನರ ಕಷ್ಟದ ಬಗ್ಗೆ ಗಮನಹರಿಸಲಿ ಎಂದು ಯು. ಟಿ. ಖಾದರ್ ವಾಗ್ದಾಳಿ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್ನಲ್ಲಿ ಶತಕ ಬಾರಿಸುವ ಮೂಲಕ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಟೀಕಿಸಿದರು.
ಪೆಟ್ರೋಲ್ ದರ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆಯೇರಿಕೆ ಕಾರಣ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.
Former MLA U T Khader referring to the rise in prices stated that the petrol stations have become tax-collecting booths for the central government after petrol price touched the Rs 100 mark.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm