ಬ್ರೇಕಿಂಗ್ ನ್ಯೂಸ್
20-06-21 07:40 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ರಾಜ್ಯ ಸರಕಾರ ಅನ್ ಲಾಕ್ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದನ್ನು ಸ್ವಲ್ಪಮಟ್ಟಿಗೆ ಮಾರ್ಪಡಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಹೊಸ ಮಾರ್ಗದರ್ಶಿ ಪ್ರಕಾರ, ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಅಂಗಡಿಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆ.
ಜೊತೆಗೆ, ವಾರಾಂತ್ಯದಲ್ಲಿ ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಏಳು ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಸಾಮಗ್ರಿ ಅಂಗಡಿ ತೆರೆದಿಡಬಹುದೇ ಎನ್ನುವ ಬಗ್ಗೆ ಜಿಲ್ಲಾಧಿಕಾರಿ ಮಾರ್ಗಸೂಚಿಯಲ್ಲಿ ಮಾಹಿತಿ ಇಲ್ಲ. ವೀಕೆಂಡ್ ಕರ್ಫ್ಯೂ ಪ್ರಕಾರ, ಈ ಅವಧಿಯಲ್ಲಿ ಎರಡು ದಿನ ಪೂರ್ತಿ ಬಂದ್ ಇರುತ್ತದೆ. ಇದಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಸಂಜೆ 7ರಿಂದ ಬೆಳಗ್ಗೆ 7ರ ವರೆಗೆ ನೈಟ್ ಕರ್ಫ್ಯೂವನ್ನು ಹೊಸತಾಗಿ ಹೇರಲಾಗಿದೆ.

ಇತರೇ ದಿನಗಳಲ್ಲಿ ತರಕಾರಿ, ದಿನಸಿ ಅಂಗಡಿಗಳು, ಮೀನು, ಮಾಂಸದ ಮಾರುಕಟ್ಟೆ, ಹಾಲಿನ ಡೈರಿಗಳು ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಇರಲಿದೆ. ಅಲ್ಲದೆ, ಆಹಾರ ಉತ್ಪನ್ನಗಳ ತಯಾರಿಕಾ ಫ್ಯಾಕ್ಟರಿಗಳು, ಕೈಗಾರಿಕೆಗಳು 50 ಶೇ. ಸಿಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಇದರ ಜೊತೆಗೆ, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಅಂಗಡಿಗಳು, ಸ್ವತಂತ್ರ ಮದ್ಯದಂಗಡಿಗಳು, ಮದ್ಯದ ಮಳಿಗೆಗಳು ಬೆಳಗ್ಗೆ ಏಳರಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ತೆರೆದಿಡಬಹುದು. ಮದ್ಯ ಪಾರ್ಸೆಲ್ ಒಯ್ಯುವುದಕ್ಕೆ ಮಾತ್ರ ಅವಕಾಶ ಇರುತ್ತದೆ. ಸಿಮೆಂಟ್, ಸ್ಟೀಲ್ ಸೇರಿದಂತೆ ಕಟ್ಟಡ ನಿರ್ಮಾಣ ಸಂಬಂಧಿತ ಸಾಮಗ್ರಿಗಳ ಅಂಗಡಿಗಳು, ದುರಸ್ತಿ ಕಾರ್ಯ ನಿರ್ವಹಿಸುವ ಗ್ಯಾರೇಜ್ ಮತ್ತಿತರ ಶಾಪ್ ಗಳು, ಕನ್ನಡಕದ ಅಂಗಡಿಗಳನ್ನು ಮಧ್ಯಾಹ್ನ ವರೆಗೆ ತೆರೆದಿಡ ಬಹುದಾಗಿದೆ.
ಆಟೋ, ಟ್ಯಾಕ್ಸಿ ವಾಹನಗಳಿಗೆ ಇಬ್ಬರು ಪ್ರಯಾಣಿಕರನ್ನು ಕುಳ್ಳಿರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಯಾವುದೇ ರೀತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿಲ್ಲ. ಹೊರ ಜಿಲ್ಲೆಗಳಿಂದ ಕೆಎಸ್ಸಾರ್ಟಿಸಿ ಮತ್ತಿತರ ಬಸ್ ಗಳ ಆಗಮನಕ್ಕೂ ಅವಕಾಶ ನೀಡಲಾಗಿಲ್ಲ. ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಪಾರ್ಕ್ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಮಾರ್ಗಸೂಚಿ ಆದೇಶ ಜುಲೈ 5ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mangalore district administration on Sunday June 20 announced that beginning Monday June 21, shops selling essential items will remain open from 7 am to 1 pm.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am