ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am