ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am