ಬ್ರೇಕಿಂಗ್ ನ್ಯೂಸ್
21-06-21 10:26 pm Mangaluru Correspondent ಕರಾವಳಿ
ಮಂಗಳೂರು, ಜೂ.21: ಎನ್ಎಂಪಿಟಿ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದು ದುರಂತಕ್ಕೀಡಾಗಿದ್ದ ಟಿಪ್ಪರ್ ಲಾರಿಯನ್ನು ರಕ್ಷಣಾ ತಂಡ ಮೇಲಕ್ಕೆತ್ತಿದ್ದು, ಲಾರಿಯೊಂದಿಗೆ ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಶವವನ್ನೂ ಮೇಲಕ್ಕೆತ್ತಿದೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡಿಂಗ್ ಮಾಡಲೆಂದು ಟಿಪ್ಪರ್ ಲಾರಿ ಹಡಗಿನ ಬಳಿಗೆ ತೆರಳಿತ್ತು. ಖಾಲಿ ಟಿಪ್ಪರ್ ಆಯತಪ್ಪಿ ಬಂದರಿನ 14ನೇ ಬರ್ತ್ ನಲ್ಲಿ ಸಮುದ್ರಕ್ಕೆ ಬಿದ್ದಿದ್ದು, ಆಳಕ್ಕೆ ಹೋಗಿದೆ. ಈ ವೇಳೆ, ಬೇರೊಂದು ಟಗ್ ನಲ್ಲಿದ್ದವರು ಕೂಡಲೇ ಸಿಐಎಸ್ಎಫ್ ಭದ್ರತಾ ವಿಭಾಗಕ್ಕೆ ವಿಷಯ ತಿಳಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.

11.50ರ ವೇಳೆಗೆ ಲಾರಿಯ ಚಾಲಕನನ್ನು ಪತ್ತೆ ಮಾಡಿದ್ದು, ಬಳಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅದಾಗಲೇ ಆತ ಮೃತಪಟ್ಟಿದ್ದ. ಆತನನ್ನು ಬಾಗಲಕೋಟೆ ಮೂಲದ ರಾಜೇಸಾಬ್ (26) ಎಂದು ಗುರುತಿಸಲಾಗಿತ್ತು. ಆತನ ಜೊತೆಗಿದ್ದ ಕ್ಲೀನರ್ ಭೀಮಪ್ಪ ನಾಪತ್ತೆಯಾಗಿದ್ದ. ಇಂದು ಬೆಳಗ್ಗಿನಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಸಂಜೆ ಹೊತ್ತಿಗೆ ಟಿಪ್ಪರ್ ಲಾರಿಯನ್ನು ಮೇಲಕ್ಕೆತ್ತಿದ್ದು ಅದರ ಒಳಗೇ ಭೀಮಪ್ಪನ ಶವ ಪತ್ತೆಯಾಗಿದೆ. ಭೀಮಪ್ಪ ಕೂಡ ಬಾಗಲಕೋಟೆ ಜಿಲ್ಲೆಯ ಮೂಲದವನಾಗಿದ್ದಾನೆ.
ಒಂದೂವರೆ ದಿನಗಳಿಂದ ನೀರಿನ ಆಳದಲ್ಲಿ ಉಳಿದಿದ್ದ ಲಾರಿಯೂ ಶವದ ರೀತಿಯಲ್ಲೇ ವಿಕಾರವಾಗಿತ್ತು. ಘಟನೆ ಬಗ್ಗೆ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read: ಎನ್ಎಂಪಿಟಿ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದು ಮುಳುಗಿದ ಟ್ರಕ್ ; ಒಬ್ಬ ಸಾವು, ಇನ್ನೊಬ್ಬ ನಾಪತ್ತೆ
A container truck had fallen into the sea on Sunday at 10.30 pm at NMPT, proving to be fatal for the lives of two men inside it. While the body of the 26-year-old driver, Rajesab was recovered, the rescue teams carried out a search operation for the missing person, 22-year-old Bhimappa.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm