ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.





ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am