ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 08:52 pm
HK News Desk
Former Gujarat CM Vijay Rupani: ವಿಮಾನ ದುರಂತ ;...
12-06-25 06:48 pm
Gujarat Plane Crash Tragedy, Update: ಗುಜರಾತ್...
12-06-25 05:13 pm
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm