ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am