ಬ್ರೇಕಿಂಗ್ ನ್ಯೂಸ್
02-07-21 10:03 pm Mangaluru Correspondent ಕರಾವಳಿ
ಉಳ್ಳಾಲ, ಜು.2: ಮುಸ್ಲಿಂ ಶಾಸಕ ಯು.ಟಿ.ಖಾದರ್ ಅವರು ಚೆಂಬುಗುಡ್ಡೆ ಹಿಂದೂ ರುದ್ರಭೂಮಿಗೆ ವಿದ್ಯುತ್ ಚಿತಾಗಾರ ಅಳವಡಿಸಲು ಇನ್ಪೋಸಿಸ್ ನಂತಹ ಅಂತರಾಷ್ಟ್ರೀಯ ಕಂಪೆನಿಯಿಂದ ಒಂದೂವರೆ ಕೋಟಿ ಅನುದಾನ ತಂದುದರ ವಿರುದ್ಧ ಭೂಕಬಳಿಕೆ ಸ್ವರೂಪ ನೀಡುವುದು ಸಲ್ಲದೆಂದು ಕಾಂಗ್ರೆಸ್ ಹಿರಿಯ ಮುಖಂಡ ಈಶ್ವರ್ ಉಳ್ಳಾಲ್ ಹೇಳಿದ್ದಾರೆ.
ತೊಕ್ಕೊಟ್ಟಿನಲ್ಲಿ ಪತ್ರಿಕಾಗೋಷ್ಟಿ ಕರೆದು ಅವರು ಮಾತನಾಡಿದರು. ಯು.ಟಿ.ಖಾದರ್ ಅವರು ತಾನೊಬ್ಬ ಮುಸ್ಲಿಮನಾದರೂ ಸಹ ಬಹಳ ಮುತುವರ್ಜಿ ವಹಿಸಿ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಗೆ ವಿದ್ಯುತ್ ಚಿತಾಗಾರ ನಿರ್ಮಿಸಲು ಇನ್ಫೋಸಿಸ್ ಕಂಪನಿಯಿಂದ ಒಂದೂವರೆ ಕೋಟಿ ಅನುದಾನ ತಂದಿದ್ದಾರೆ. ಆದರೆ ಕೆಲವರು ಷಡ್ಯಂತರ ನಡೆಸಿ ಭೂಕಬಳಿಕೆ ನಡೆಯುತ್ತಿದೆ ಎಂದು ಅಪಪ್ರಚಾರ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ಇರುವ ಒಂದೂವರೆ ಕೋಟಿ ಅನುದಾನದಲ್ಲಿ ಈಗಿರುವ ಕಟ್ಟಿಗೆಯ ಚಿತಾಗಾರದ ಬಳಿಯಲ್ಲೇ ವಿದ್ಯುತ್ ಚಿತಾಗಾರ ನಿರ್ಮಿಸಲು ಸಾಧ್ಯ ,ಹತ್ತಿರದ ಶವ ಹೂಳುವ 45 ಸೆಂಟ್ಸ್ ಜಾಗದಲ್ಲಿ ನಿರ್ಮಿಸೋದಾದರೆ 50 ಲಕ್ಷ ಹೆಚ್ಚು ಹಣ ಬೇಕೆಂದು ಕಂಪನಿ ಪ್ರಮುಖರು ಹೇಳಿದ್ದಾರೆ. ಉಳ್ಳಾಲದ ಇತಿಹಾಸದಲ್ಲೇ ಯಾರೊಬ್ಬ ನಾಯಕರೂ ರುದ್ರಭೂಮಿಗೆ ಇಷ್ಟೊಂದು ದೊಡ್ಡ ಅನುದಾನ ತಂದಿಲ್ಲ. ಆದರೂ ಭೂಕಬಳಿಕೆ ಎಂದು ಗುಳ್ಳೆಬ್ಬಿಸಿ ಶಾಸಕ ಯು.ಟಿ.ಖಾದರ್ ಅವರನ್ನು ಎತ್ತಿ ಕಟ್ಟುತ್ತಿರುವುದು ಸರಿಯಲ್ಲ. ಬದಲಾವಣೆ ಬೇಕಿದ್ದರೆ ಶಾಸಕರೊಂದಿಗೆ ಮಾತನಾಡಲಿ, ಅದು ಬಿಟ್ಟು ಈ ರೀತಿ ಅಪಪ್ರಚಾರ ಮಾಡೋದನ್ನ ನಿಲ್ಲಿಸಲಿ ಎಂದರು.



ಮುಖಂಡರಾದ ಸುರೇಶ್ ಭಟ್ನಗರ ಮಾತನಾಡಿ ಚೆಂಬುಗುಡ್ಡೆಯ ಹಿಂದೂ ರುದ್ರಭೂಮಿಗೆ ಅನೇಕ ವರುಷಗಳ ಇತಿಹಾಸವಿದೆ. ಇನ್ನು ಇದನ್ನ ಕಬಳಿಸೋ ಪ್ರಶ್ನೆ ಎಲ್ಲಿಂದ ಬರುತ್ತೆ. ಇನ್ಫೋಸಿಸ್ ನಿಂದ ವಿದ್ಯುತ್ ಚಿತಾಗಾರ ನಿರ್ಮಾಣವಾಗೋ ವಿಚಾರವನ್ನ ಸ್ಮಶಾನದ ನಿರ್ವಹಣಾ ಸಮಿತಿ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಅವರಲ್ಲಿ ಹೇಳಿದಾಗ ಅವರೂ ಆ ಯೋಜನೆಯನ್ನ ಪ್ರಶಂಸಿಸಿದ್ದಾರೆ. ಪ್ರಸ್ತುತ ಸ್ಮಶಾನದಲ್ಲಿ ಶವ ಸುಡಲು ಸುಮಾರು 4000 ರೂಪಾಯಿ ಖರ್ಚು ತಗಲುತ್ತಿದ್ದು, ಕೇವಲ 200 ರೂಪಾಯಿ ಖರ್ಚಲ್ಲಿ ಜನರು ಶವ ಸುಡುವಂತಾಗಲಿ ಎಂಬ ಸದುದ್ದೇಶದಿಂದ ಯು.ಟಿ.ಖಾದರ್ ಅವರು ಈ ಯೋಜನೆಯನ್ನ ತಂದಿದ್ದಾರೆ. ಸುಖಾಸುಮ್ಮನೆ ಸ್ಮಶಾನದ ಜಾಗ ಕಬಳಿಸುತ್ತಿದ್ದಾರೆ ಎಂದು ಷಡ್ಯಂತರದಿಂದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು. ಚೆಂಬುಗುಡ್ಡೆ ಪ್ರದೇಶ ಎತ್ತರ ಇರೋದರಿಂದ ಸ್ಮಶಾನಕ್ಕೆ ಕಾಯ್ದಿರಿಸಿದ ಪ್ರದೇಶದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಟ್ಯಾಂಕನ್ನು ನಿರ್ಮಿಸಲಾಯಿತು. ಅನೇಕ ಗ್ರಾಮಗಳಿಗೆ ಕುಡಿಯುವ ನೀರು ಸಿಗಬೇಕೆಂಬ ಸದುದ್ದೇಶದಿಂದ ಶಾಸಕರು ಈ ಕಾಮಗಾರಿ ನಡೆಸಿದರೂ ಅದಕ್ಕೂ ಸ್ಮಶಾನದ ಜಾಗ ಮಾರಾಟ ನಡೆಸಿದ್ದಾರೆಂದು ಅಪಪ್ರಚಾರ ನಡೆಸಿದರು. ಶಾಸಕ ಯು.ಟಿ ಖಾದರ್ ಅವರಿಂದ ಹಿಂದೂಗಳಿಗೆ ಎಂದಿಗೂ ಅನ್ಯಾಯವಾಗಿಲ್ಲ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷೆ ಚಿತ್ರಕಲಾ, ಸದಸ್ಯರಾದ ಶಶಿಕಲಾ, ಪ್ರಮುಖರಾದ ದೀಪಕ್ ಪಿಲಾರ್, ನಾಗೇಶ್ ಶೆಟ್ಟಿ, ವಸಂತ್ ಭಟ್ನಗರ, ಕಿಶೋರ್ ಮೊದಲಾದವರು ಇದ್ದರು.
Ullal Ishwar Ullal appreciates MLA UT Khaders efforts for Chembugudde Electric Crematorium implementation
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm