ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm