ಬ್ರೇಕಿಂಗ್ ನ್ಯೂಸ್
05-07-21 04:20 pm Mangalore Correspondent ಕರಾವಳಿ
ಉಳ್ಳಾಲ, ಜು.5: ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಕೋವಿಡ್ ಸಂಕಷ್ಟ ಕಾಲದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊಡಲಾಗುವ ಆಹಾರ ಕಿಟ್ ವಿತರಣಾ ಪಟ್ಟಿಯಲ್ಲಿ ಅನೇಕ ನೊಂದಾಯಿತ ಕಾರ್ಮಿಕರ ಹೆಸರನ್ನು ಕೈಬಿಡಲಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಎಲ್ಲರಿಗೂ ಕಿಟ್ ದೊರಕುವಂತೆ ಮಾಡುತ್ತೇನೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.



ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಅವರು ಆಹಾರ ಕಿಟ್ ವಿತರಿಸಿದರು. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಿದರೂ ಅನೇಕರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ನೋಂದಾಯಿತ ಅನೇಕ ಕಾರ್ಮಿಕರು ಆಹಾರ ಕಿಟ್ ಸಿಗುತ್ತದೆಂದು ಪಂಚಾಯತ್ ಕಚೇರಿಗೆ ಬಂದಿದ್ದರು. ಪಂಚಾಯತ್ ಪಿಡಿಓ ಅವರಲ್ಲಿ ತಮ್ಮ ಹೆಸರೇಕೆ ಕೈ ಬಿಡಲಾಗಿದೆ ಎಂದು ಕೇಳಿದರೆ ಅವರಲ್ಲೂ ಸಮರ್ಪಕ ಉತ್ತರ ದೊರೆತಿಲ್ಲ. ಹಾಗಾಗಿ ಕಾರ್ಮಿಕರು ನೇರ ಶಾಸಕರಲ್ಲೇ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯು.ಟಿ. ಖಾದರ್ ಅವರು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾದ ಕಾರ್ಮಿಕರ ಪಟ್ಟಿಯನ್ನ ನೀಡಿ, ಇಲಾಖೆಯಲ್ಲಿ ಆಗಿರುವ ಲೋಪಗಳನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಪರಿಶೀಲಿಸಿ ಆದಷ್ಟು ಶೀಘ್ರ ಎಲ್ಲ ನೊಂದಾಯಿತ ಕಾರ್ಮಿಕರಿಗೆ ಆಹಾರ ಕಿಟ್ ಸಿಗುವಂತೆ ಮಾಡುತ್ತೇನೆಂದರು.




ನೋಂದಣಿ ಮಾಡದ ಕಟ್ಟಡ ಕಾರ್ಮಿಕರು ಅತೀ ಶೀಘ್ರ ನೋಂದಣಿ ಮಾಡಿ ಇಲಾಖೆಯಿಂದ ತಮ್ಮ ಕುಟುಂಬಕ್ಕೆ ಸಿಗುವ ವಿವಿಧ ಸೌಲಭ್ಯಗಳನ್ನ ಬಳಸಿಕೊಳ್ಳಿ. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ತಲಪಾಡಿಯಲ್ಲಿ ಪ್ರತ್ಯೇಕ ಶಿಬಿರವನ್ನೂ ಆಯೋಜಿಸುವುದಾಗಿ ಹೇಳಿದರು.
ತಲಪಾಡಿ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರ್ , ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ತಲಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಖಾದರ್, ಮುಖಂಡರಾದ ಸತೀಶ್ ಉಳ್ಳಾಲ್, ಪಿಡಿಓ ಕೇಶವ ಪೂಜಾರಿ, ತಾಪಂ ಮಾಜಿ ಸದಸ್ಯರಾದ ಸಿದ್ದೀಕ್ ಕೊಳಂಗೆರೆ, ಸುರೇಖಾ ಚಂದ್ರಹಾಸ್, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Ullal Labourers registered for Food Kit supply go empty-handed workers slam MLA UT Khader.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm