ಬ್ರೇಕಿಂಗ್ ನ್ಯೂಸ್
05-07-21 04:20 pm Mangalore Correspondent ಕರಾವಳಿ
ಉಳ್ಳಾಲ, ಜು.5: ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಇಲಾಖೆಯಿಂದ ಕೋವಿಡ್ ಸಂಕಷ್ಟ ಕಾಲದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊಡಲಾಗುವ ಆಹಾರ ಕಿಟ್ ವಿತರಣಾ ಪಟ್ಟಿಯಲ್ಲಿ ಅನೇಕ ನೊಂದಾಯಿತ ಕಾರ್ಮಿಕರ ಹೆಸರನ್ನು ಕೈಬಿಡಲಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಎಲ್ಲರಿಗೂ ಕಿಟ್ ದೊರಕುವಂತೆ ಮಾಡುತ್ತೇನೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.



ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಅವರು ಆಹಾರ ಕಿಟ್ ವಿತರಿಸಿದರು. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಿದರೂ ಅನೇಕರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ನೋಂದಾಯಿತ ಅನೇಕ ಕಾರ್ಮಿಕರು ಆಹಾರ ಕಿಟ್ ಸಿಗುತ್ತದೆಂದು ಪಂಚಾಯತ್ ಕಚೇರಿಗೆ ಬಂದಿದ್ದರು. ಪಂಚಾಯತ್ ಪಿಡಿಓ ಅವರಲ್ಲಿ ತಮ್ಮ ಹೆಸರೇಕೆ ಕೈ ಬಿಡಲಾಗಿದೆ ಎಂದು ಕೇಳಿದರೆ ಅವರಲ್ಲೂ ಸಮರ್ಪಕ ಉತ್ತರ ದೊರೆತಿಲ್ಲ. ಹಾಗಾಗಿ ಕಾರ್ಮಿಕರು ನೇರ ಶಾಸಕರಲ್ಲೇ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯು.ಟಿ. ಖಾದರ್ ಅವರು ಫಲಾನುಭವಿಗಳ ಪಟ್ಟಿಯಲ್ಲಿ ಕೈಬಿಡಲಾದ ಕಾರ್ಮಿಕರ ಪಟ್ಟಿಯನ್ನ ನೀಡಿ, ಇಲಾಖೆಯಲ್ಲಿ ಆಗಿರುವ ಲೋಪಗಳನ್ನು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಪರಿಶೀಲಿಸಿ ಆದಷ್ಟು ಶೀಘ್ರ ಎಲ್ಲ ನೊಂದಾಯಿತ ಕಾರ್ಮಿಕರಿಗೆ ಆಹಾರ ಕಿಟ್ ಸಿಗುವಂತೆ ಮಾಡುತ್ತೇನೆಂದರು.




ನೋಂದಣಿ ಮಾಡದ ಕಟ್ಟಡ ಕಾರ್ಮಿಕರು ಅತೀ ಶೀಘ್ರ ನೋಂದಣಿ ಮಾಡಿ ಇಲಾಖೆಯಿಂದ ತಮ್ಮ ಕುಟುಂಬಕ್ಕೆ ಸಿಗುವ ವಿವಿಧ ಸೌಲಭ್ಯಗಳನ್ನ ಬಳಸಿಕೊಳ್ಳಿ. ಕಾರ್ಮಿಕ ಇಲಾಖೆಗೆ ಹೆಸರು ನೋಂದಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ತಲಪಾಡಿಯಲ್ಲಿ ಪ್ರತ್ಯೇಕ ಶಿಬಿರವನ್ನೂ ಆಯೋಜಿಸುವುದಾಗಿ ಹೇಳಿದರು.
ತಲಪಾಡಿ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರ್ , ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ತಲಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಖಾದರ್, ಮುಖಂಡರಾದ ಸತೀಶ್ ಉಳ್ಳಾಲ್, ಪಿಡಿಓ ಕೇಶವ ಪೂಜಾರಿ, ತಾಪಂ ಮಾಜಿ ಸದಸ್ಯರಾದ ಸಿದ್ದೀಕ್ ಕೊಳಂಗೆರೆ, ಸುರೇಖಾ ಚಂದ್ರಹಾಸ್, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Ullal Labourers registered for Food Kit supply go empty-handed workers slam MLA UT Khader.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm