ಬ್ರೇಕಿಂಗ್ ನ್ಯೂಸ್
11-07-21 07:54 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಅಟೋ ಚಾಲಕನನ್ನು ಅಡ್ಡಗಟ್ಟಿ ಬಸ್ ಚಾಲಕ ಸೇರಿ ರಸ್ತೆ ಮಧ್ಯದಲ್ಲೇ ಕಪಾಳಕ್ಕೆ ಹೊಡೆದು ಹಲ್ಲೆಗೈದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಆಟೋ ಚಾಲಕ ಸುಧಾಕರ ಎಂಬವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಸುರತ್ಕಲ್ ಮಾರಿಗುಡಿ ಬಳಿ ಕೈ ಅಡ್ಡಹಿಡಿ್ದದು ನಿಲ್ಲಿಸಿದ ಇಬ್ಬರನ್ನು ಕುಳ್ಳಿರಿಸಿಕೊಂಡು ತೆರಳಿದ್ದರು. ಇದನ್ನು ಗಮನಿಸಿದ ಉಡುಪಿಯಿಂದ ಮಂಗಳೂರಿನತ್ತ ಬರುತ್ತಿದ್ದ ಕೊಹಿನೂರ್ ಹೆಸರಿನ ಖಾಸಗಿ ಬಸ್ ಚಾಲಕ ನೇರವಾಗಿ ಮುನ್ನುಗ್ಗಿ ಬಂದು ಆಟೋವನ್ನು ಅಡ್ಡಹಾಕಿ ಚಾಲಕನ ಮೇಲೆ ಕೈಮಾಡಿದ್ದಾರೆ.
ನಮ್ಮ ಪ್ರಯಾಣಿಕರನ್ನು ನೀನು ಯಾಕೆ ಒಯ್ಯುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ್್ದದ್ದಲ್ಲದೆ, ಆಟೋ ಚಾಲಕ ಚೇಳ್ಯಾರ್ ಪದವು ನಿವಾಸಿ 55 ವರ್ಷದ ಸುಧಾಕರ್ ಮೇಲೆ ಬಸ್ ಚಾಲಕ ಕಪಾಳಕ್ಕೆ ಬಾರಿಸಿದ್ದಾನೆ. ಅಲ್ಲದೆ, ಬಸ್ ಕಂಡಕ್ಟರ್ ಕೂಡ ಸ್ಥಳಕ್ಕೆ ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರಯಾಣಿಕರನ್ನು ಆಸ್ಪತ್ರೆಗೆ ಒಯ್ಯುತ್ತಿರುವುದಾಗಿ ಹೇಳಿದರೂ, ಬಸ್ ಸಿಬಂದಿ ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನೆಲಕ್ಕೆ ದೂಡಿ ಹಾಕಿ ಮೂರ್ನಾಲ್ಕು ಬಾರಿ ಕೆನ್ನೆಗೆ ಬಾರಿಸಿದ್ದು ರಸ್ತೆ ಬದಿಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆ ಘಟನೆ ಬಗ್ಗೆ ರಿಕ್ಷಾ ಚಾಲಕರು ಸುರತ್ಕಲ್ ಪೊಲೀಸರಿಗೆ ದೂರು ನೀಡಿ, ಕೂಡಲೇ ಬಸ್ ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಸ್ ಸಿಬಂದಿಯನ್ನು ಬಂಧಿಸುವುದಲ್ಲದೆ, ಬಸ್ಸನ್ನೂ ಸೀಜ್ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಬೆಳಗ್ಗೆ ದೂರು ದಾಖಲಾಗಿೂ ಸಂಜೆಯಾದ್ರೂ ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸಿಲ್ಲ. ಬಸ್ಸನ್ನೂ ಸೀಜ್ ಮಾಡಿಲ್ಲ ಎಂದು ಸುರತ್ಕಲ್ ಪರಿಸರದ ಆಟೋ ಚಾಲಕರು ಹೆಡ್ ಲೈನ್ ಕರ್ನಾಟಕಕ್ಕೆ ಕರೆ ಮಾಡಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸದಿದ್ದರೆ ನಾಳೆ ಬಸ್ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಸುರತ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಲತೀಫ್ ತಿಳಿಸಿದ್ದಾರೆ.
Mangalore Kohinoor Bus Driver Brutally attacks Auto Driver for Picking up Passenger. The driver along with Conductor pulled the auto driver on road and attacked him. A case has been registered at the Surathkal police station.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm