ಬ್ರೇಕಿಂಗ್ ನ್ಯೂಸ್
13-07-21 04:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ತೆಂಕುತಿಟ್ಟು ಯಕ್ಷಗಾನದ ಹೆಸರಾಂತ ಹಿರಿಯ ಕಲಾವಿದ, ಅಗ್ರಮಾನ್ಯ ಕಿರೀಟ ವೇಷಧಾರಿಯಾಗಿ ಗುರುತಿಸಲ್ಪಟ್ಟಿದ್ದ ಸಂಪಾಜೆ ಶೀನಪ್ಪ ರೈ(81) ಇಂದು ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸಂಪಾಜೆಯ ಕೀಲಾರಿನ ಮಾದೇಪಾಲು ಎಂಬಲ್ಲಿ 1940ರ ಜೂನ್ 07ರಂದು ಜನಿಸಿದ್ದ ಸಂಪಾಜೆ ಶೀನಪ್ಪ ರೈಯವರು ನಾಲ್ಕನೇ ತರಗತಿ ವರೆಗೆ ಶಾಲೆಗೆ ತೆರಳಿ, ಬಳಿಕ ಯಕ್ಷಗಾನದತ್ತ ಆಕರ್ಷಿತರಾಗಿದ್ದರು.
ಪ್ರಸ್ತುತ ಸುರತ್ಕಲ್ನ ಕಾಟಿಪಳ್ಳದಲ್ಲಿ ಪುತ್ರನ ಮನೆಯಲ್ಲಿ ನೆಲೆಸಿದ್ದರು. ಯಕ್ಷಗಾನದ ಗತ್ತಿನ ಕಿರೀಟ ವೇಷಗಳಿಗೆ ಹೆಸರಾಗಿದ್ದ ಶೀನಪ್ಪ ರೈಯವರಿಗೆ ಹೆಚ್ಚು ಹೆಸರು ತಂದುಕೊಟ್ಟಿದ್ದು ರಕ್ತಬೀಜ ಪಾತ್ರ. ಕಟೀಲು ಮೇಳದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೇವೆಯಾಟ ಮಾಡಿದ್ದ ಶೀನಪ್ಪ ರೈಯವರು ಸುದೀರ್ಘ ಕಾಲದಿಂದ ರಕ್ತಬೀಜ ಪಾತ್ರ ಮಾಡಿಕೊಂಡೇ ಬಂದಿದ್ದರು. ದೇವಿ ಮಹಾತ್ಮೆ ಯಕ್ಷಗಾನ ಅಂದರೆ, ಶೀನಪ್ಪ ರೈ ಇದ್ದಾರಾ ಎನ್ನುವಷ್ಟರ ಮಟ್ಟಿಗೆ ಅವರ ಖದರ್ ಇತ್ತು.



ಇದಲ್ಲದೆ, ಹಿರಣ್ಯಾಕ್ಷ, ಶಿಶುಪಾಲ, ಸತ್ಯವ್ರತ, ಕೌರವ, ದೇವೇಂದ್ರ, ಇಂದ್ರಜಿತು ವೇಷಗಳಿಂದಲೂ ಅವರು ಪ್ರಸಿದ್ಧರಾಗಿದ್ದರು.
ಕಟೀಲು ಮೇಳದಲ್ಲಿ ಹಲವು ದಶಕಗಳ ತಿರುಗಾಟದ ಬಳಿಕ ಶೀನಪ್ಪ ರೈಯವರು ಕುಂಡಾವು, ವೇಣೂರು, ಇರುವೈಲು, ಸೌಕೂರು, ಚೌಡೇಶ್ವರಿ, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮೂರು ವರ್ಷಗಳ ಹಿಂದೆ ಅನಾರೋಗ್ಯದಿಂದಾಗಿ ತಿರುಗಾಟ ನಿಲ್ಲಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿರುವ ಸಂಪಾಜೆ ಶೀನಪ್ಪ ರೈಗಳು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Mangalore Yakshagana artiste Sampaje Shinappa (81) no more. He also was awarded with Karnataka Rajyotsava Prashasti and many more prestigious awards.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm