ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 12:11 pm
Mangaluru Correspondent
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm