ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am