ಬ್ರೇಕಿಂಗ್ ನ್ಯೂಸ್
19-07-21 02:40 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 19: ಗಂಡನ ಕುಡಿತದ ಚಟಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣಾಗಿದ್ದರು. ವಿಪರೀತ ಮಳೆಯಿಂದಾಗಿ ಶಾಮಿಯಾನ ಹಾಕಿ ಪತ್ನಿಯ ಅಂತ್ಯಕ್ರಿಯೆ ವಿಧಿಯನ್ನು ನಡೆಸಲಾಗಿತ್ತು. ಆದರೆ, ಮರುದಿನ ಅಂತ್ಯವಿಧಿಗೆ ಹಾಕಿದ್ದ ಶಾಮಿಯಾನದ ಕಂಬಕ್ಕೆ ಗಂಡನೂ ನೇಣು ಹಾಕ್ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ನಡೆದಿದೆ.
ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ಘಟನೆ ನಡೆದಿದ್ದು ಚಂದ್ರಾವತಿ (49) ಮತ್ತು ಆಕೆಯ ಗಂಡ ಶಿವಪ್ಪ ಗೌಡ (56) ಮೃತರು.
ಚಂದ್ರಾವತಿ ಶನಿವಾರ ಮಧ್ಯಾಹ್ನ ದನಕ್ಕೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಆದರೆ, ತೋಟಕ್ಕೆ ಹೋದವರು ಮರಳಿ ಬಂದಿರಲಿಲ್ಲ. ಹುಡುಕಾಟ ನಡೆಸಿದಾಗ, ಆಕೆ ತೋಟದ ಬದಿಯ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು.
ಗಂಡನ ವಿಪರೀತ ಕುಡಿತದ ಚಟದಿಂದಾಗಿ ಬೇಸತ್ತಿದ್ದ ಪತ್ನಿ ಚಂದ್ರಾವತಿ ಮನೆಯಲ್ಲಿ ಬದುಕುವುದೇ ಕಷ್ಟ ಎನ್ನುವ ಸ್ಥಿತಿಗೆ ತಲುಪಿದ್ದರು. ಗಂಡನ ಪೀಡನೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿತ್ತು. ಬಳಿಕ ಅಂದು ರಾತ್ರಿಯೇ ಸ್ಥಳೀಯರು ಸೇರಿ ಮನೆಯ ಆವರಣದಲ್ಲಿ ಮತ್ತು ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶಾಮಿಯಾನ ಹಾಕಿ, ರಾತ್ರಿ ವೇಳೆಗೆ ಚಂದ್ರಾವತಿಯ ಅಂತ್ಯವಿಧಿ ಮುಗಿಸಿದ್ದರು.
ಮರುದಿನ ಬೆಳಗ್ಗೆ ನೋಡಿದರೆ, ಶಿವಪ್ಪ ಗೌಡ ಅಂತ್ಯ ವಿಧಿಗೆ ಹಾಕಿದ್ದ ಶಾಮಿಯಾನದ ರಾಡಿಗೆ ನೇಣು ಹಾಕ್ಕೊಂಡು ಮೃತಪಟ್ಟಿದ್ದು ಕಂಡುಬಂದಿದೆ. ಶಿವಪ್ಪ ಗೌಡ ಕೂಡ ಅದೇ ರೀತಿ ಅಂತ್ಯ ಕಂಡಿದ್ದು ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ. ಶಿವಪ್ಪ - ಚಂದ್ರಾವತಿ ದಂಪತಿಗೆ ಮಕ್ಕಳು ಇರಲಿಲ್ಲ. ತನ್ನ ತಾಯಿ ನಾಗಮ್ಮ ಜೊತೆ ಮುಡಿಪಿರೆಯಲ್ಲಿ ಶಿವಪ್ಪ ಗೌಡ ವಾಸವಿದ್ದರು. ಈಗ ಮಗ ಮತ್ತು ಸೊಸೆ ಸಾವು ಕಂಡಿದ್ದರಿಂದ ಮನೆಯಲ್ಲಿ ವೃದ್ಧ ತಾಯಿ ಒಬ್ಬಂಟಿಯಾಗಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident reported from Mudipire in Machina village in the taluk, a man ended his life hanging himself from the rod of the shamiyana erected at the funeral site of his wife. Chandravathi (49), wife of Shivappa Gowda (56), had ended her life on Saturday. Shivappa ended his life in the early hours of Sunday July 18.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm