ಬ್ರೇಕಿಂಗ್ ನ್ಯೂಸ್
22-07-21 01:46 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕ ಲೋ ಬಿಪಿಯಿಂದಾಗಿ ಸ್ಟೇರಿಂಗ್ ಮೇಲ್ಗಡೆಯೇ ಕುಸಿದು ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್ ನಿಲ್ಲಿಸಿದ್ದಾನೆ. ಚಾಲಕನಿಗೆ ಕಣ್ಣು ಮಂಜಾಗುತ್ತಲೇ ಬಸ್ ಹೆದ್ದಾರಿ ಬದಿಯ ಸಹ್ಯಾದ್ರಿ ಕಾಲೇಜಿನ ಗೇಟ್ ಮುಂಭಾಗದಲ್ಲಿ ನಿಂತಿರುವುದು ಸೋಜಿಗ ಎನಿಸಿದೆ.
ಬಸ್ಸಿನಲ್ಲಿ ಬಾಗಿಲಲ್ಲಿ ನೇತಾಡುವಷ್ಟು ಫುಲ್ ಜನರಿದ್ದುದಲ್ಲದೆ ಅರೆಕ್ಷಣ ಚಾಲಕನ ನಿಯಂತ್ರಣ ತಪ್ಪುತ್ತಿದ್ದರೂ ದುರಂತವೇ ನಡೆದುಹೋಗುತ್ತಿತ್ತು. ಬಸ್ ಚಾಲಕ ಪುತ್ತೂರು ಮೂಲದ ಸಂತೋಷ್ ಎಂಬಾತನಾಗಿದ್ದು ಕೂಡಲೇ ಸ್ಥಳೀಯರು ಮತ್ತು ಇತರೇ ಪ್ರಯಾಣಿಕರು ಸೇರಿ ಚಾಲಕನನ್ನು ಸ್ಟೇರಿಂಗ್ ಎಡೆಯಿಂದ ಹೊರಗೆ ಎಳೆದಿದ್ದಾರೆ. ಬಳಿಕ ಪಡೀಲಿನ ನ್ಯೂರೋ ಫಸ್ಟ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರಂಭದಲ್ಲಿ ಫಿಟ್ಸ್ ಬಂದಿದೆ ಎನ್ನಲಾಗಿತ್ತು. ಪ್ರಯಾಣಿಕರು ಮತ್ತು ಸಿಬಂದಿಯೂ ಅದನ್ನೇ ಹೇಳಿದ್ದರು. ವೈದ್ಯರು ಪರಿಶೀಲಿಸಿ, ಲೋ ಬಿಪಿಯಿಂದಾಗಿ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾರೆ.





ಜೀವ ಉಳಿದಿದ್ದೇ ಸೋಜಿಗ !
ಬಸ್ಸಿನಲ್ಲಿ ಕಿಕ್ಕಿರಿದು ತುಂಬಿದಷ್ಟು ಜನರು ಇದ್ದರು. ಚಾಲಕ ಹಠಾತ್ತಾಗಿ ಫಿಟ್ಸ್ ಬಂದು ನೆಲಕ್ಕುರುಳಿದ್ದರಿಂದ ಜನರಲ್ಲಿ ದುರಂತದ ಭಯ ಆವರಿಸಿತ್ತು. ಸ್ವಲ್ಪ ತಪ್ಪಿದ್ದರೂ ಬಸ್ ಉರುಳಿ ಬಿದ್ದು ಅಥವಾ ಬೇರೆ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ನಡೆಯುವ ಸಾಧ್ಯತೆ ಇತ್ತು. ಆದರೆ, ಚಾಲಕ ತನಗೆ ಕಣ್ಣು ಮಂಜು ಆವರಿಸುತ್ತಲೇ ಬಸ್ಸಿನ ಬ್ರೇಕ್ ಅದುಮಿದ್ದು ಸ್ಟಾಪ್ ಬಟನ್ ಒತ್ತಿದ್ದಾನೆ. ಬಸ್ಸಿನಲ್ಲಿದ್ದ ಹಲವಾರು ಜನ ಪ್ರಾಣ ಕಳಕೊಳ್ಳುವ ಸಾಧ್ಯತೆ ಇತ್ತು. ಯಬ್ಬಾ ಜೀವ ಉಳಿದಿದ್ದೇ ಹೆಚ್ಚು ಅಂತಾ ಪ್ರಯಾಣಿಕರು ಚಾಲಕನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಚಾಲಕ ಸಂತೋಷ್ ಒಂದು ವರ್ಷದಿಂದ ಇದೇ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಸ್ ಕೂಡ ವೇಗವಾಗಿಯೇ ಬರ್ತಾ ಇತ್ತು. ಆದರೆ, ಚಾಲಕನ ಚಾಕಚಕ್ಯತೆಯಿಂದ ದುರಂತ ತಪ್ಪಿ ಹೋಗಿದೆ ಎಂದು ಬಸ್ಸಿನ ನಿರ್ವಾಹಕ ಶೇಖರ್ ಹೇಳಿದ್ದಾರೆ.
Video:
Mangalore Bus Driver Unconscious while driving stops bus on time major accident averted at Adyar in Valachil. The driver is said to be Santosh from Puttur a employee of Safeway travels. The driver is admitted to hospital.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm