ಬ್ರೇಕಿಂಗ್ ನ್ಯೂಸ್
26-07-21 05:45 pm Mangalore Correspondent ಕರಾವಳಿ
ಮಂಗಳೂರು, ಜುಲೈ 26: ಆದಾಯ ಮೀರಿ ಅಪಾರ ಆಸ್ತಿ ಗಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಘೋಷಣೆ ಮಾಡಿದೆ.
2007ರ ಜುಲೈ 25 ರಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕ ಪ್ರಭುದೇವ ಮಾಣೆ ಮತ್ತು ಅವರ ತಂಡ ಟೌನ್ ಪ್ಲಾನಿಂಗ್ ಅಧಿಕಾರಿ ಶಿವರಾಜು ಕುರಿತ ವಿವಿಧ ಕಡೆಯ ಆಸ್ತಿಗಳಿಗೆ ದಾಳಿ ನಡೆಸಿತ್ತು. ದಾಳಿ ಬಳಿಕ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿವೈಎಸ್ಪಿ ಆಗಿದ್ದ ಡಾ. ಪ್ರಭುದೇವ್ ಮಾಣೆ ಆರೋಪಿ ಶಿವರಾಜು ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದ ಎಂದು ತೀರ್ಪು ನೀಡಿತ್ತು.
ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಶಿಕ್ಷೆ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು 104 ಪುಟಗಳ ಆದೇಶದಲ್ಲಿ ತೀರ್ಪು ನೀಡಿದ್ದಾರೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದ. ಅದರೆ ವಿಶೇಷ ಸರಕಾರಿ ಅಭಿಯೋಜಕ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರಣವಾದ್ದರಿಂದ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನ ಕೋರಿದರು. ನ್ಯಾಯಾಧೀಶರು, ಅಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000/-ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ ವಿಧಿಸಿದ್ದಾರೆ. ಅಲ್ಲದೆ, ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕ್ಯಾನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ. ಮತ್ತು ಹದಿನಾಲ್ಕು ವರ್ಷಗಳಲ್ಲಿ ಅಕ್ರಮವಾಗಿ ರೂ. 17,00,000 ಆಸ್ತಿ ಮಾಡಿದ್ದರಿಂದ ಅದರ ಎರಡು ಪಟ್ಟು ದಂಡ ವಿಧಿಸುವುದು ಸೂಕ್ತ ಎಂದು 34,00,000 ರೂ. ದಂಡ ಪಾವತಿಸಲು ಆದೇಶಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಅತ್ಯಂತ ಅಪರೂಪಕ್ಕೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Mangalore city corporation Assistant Town planning BP Shivaraj found guilty in a corruption case in which Lokayukta court has ordered five years of jail term and fine of Rs 34 lakhs.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am