ಬ್ರೇಕಿಂಗ್ ನ್ಯೂಸ್
27-07-21 02:23 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ಕುಸಿದು ನಿಂತಿದ್ದ ಮರವೂರು ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಪೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.
ಇದೀಗ ಸೇತುವೆಯನ್ನು ಪರ್ಯಾಯ ಇಂಜಿನಿಯರಿಂಗ್ ಕೆಲಸದ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಪಿಡಬ್ಲ್ಯುಡಿ ಇಲಾಖೆಯ ಇಂಜಿನಿಯರುಗಳು ಮತ್ತು ಅಧಿಕಾರಿಗಳ ಸಲಹೆಯಂತೆ ಮುಗ್ರೋಡಿ ಕನ್ ಸ್ಟ್ರಕ್ಷನ್ ಕಂಪನಿಯವರೇ ಈ ಕೆಲಸವನ್ನು ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ.
ಜುಲೈ 29ರಂದು ಸೇತುವೆಯಲ್ಲಿ ಬಸ್ ಸೇರಿದಂತೆ ಲಘು ವಾಹನಗಳು ಸಾಗಬಹುದೇ ಎನ್ನುವ ಬಗ್ಗೆ ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿಗಳು ಪರೀಕ್ಷೆ ನಡೆಸಲಿದ್ದಾರೆ. ಆನಂತರವಷ್ಟೇ ವಾಹನಗಳು ಸಾಗುವುದಕ್ಕೆ ಅವಕಾಶ ನೀಡುವ ಬಗ್ಗೆ ನಿರ್ಧರಿಸಲಿದ್ದಾರೆ. ಕಳೆದ ಜೂನ್ 15ರಂದು ರಾತ್ರಿ ಭಾರೀ ಮಳೆಯ ನಡುವೆ ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದು ಕಂಡುಬಂದಿತ್ತು. ಆನಂತರ ಅಲ್ಲಿಂದ ವಾಹನ ಸಂಚಾರವನ್ನು ಕಡಿತ ಮಾಡಲಾಗಿತ್ತು. ಇದರಿಂದಾಗಿ ಬಜ್ಪೆ ವಿಮಾನ ನಿಲ್ದಾಣ, ಕಟೀಲು, ಅದ್ಯಪಾಡಿಗೆ ತೆರಳುವವರು ಸಂಚಾರಕ್ಕೆ ತೊಂದರೆಗೀಡಾಗಿದ್ದರು. ಮಂಗಳೂರಿನಿಂದ ತೆರಳುವ ಮಂದಿ ಜೋಕಟ್ಟೆ ಅಥವಾ ಕೈಕಂಬದ ಮೂಲಕ ಸುತ್ತುಬಳಸಿ ಬಜ್ಪೆಗೆ ತೆರಳಬೇಕಾಗಿತ್ತು.
Repair and restoration work on a pillar of the Maravoor bridge built across River Phalguni on Mangaluru-Atrady state highway that had jerked a little has almost been finished. The bridge is likely to be thrown open for light motor vehicle movement from July 30 onwards.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 12:12 pm
Mangalore Correspondent
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm