ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕರಾವಳಿ
ಬಂಟ್ವಾಳ, ಜುಲೈ 30: ತಾಲೂಕಿನ ಬ್ರಹ್ಮರಕೂಟ್ಲು ಬಳಿಯ ಕಳ್ಳಿಗೆ ಗ್ರಾಮದಲ್ಲಿ ಯುವಕನೊಬ್ಬನ ಶವ ರೈಲು ಬಡಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳ್ಳಿಗೆ ಗ್ರಾಮದ ದೇವಂದಬೆಟ್ಟು ನಿವಾಸಿ ಕಾರ್ತಿಕ್ (25) ನಿನ್ನೆ ಸಂಜೆ ಮನೆಯಿಂದ ಹೊರಗೆ ತೆರಳಿದ್ದ. ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಮುಂಜಾನೆ 3 ಗಂಟೆಯ ವೇಳೆಗೆ ಕಾರ್ತಿಕ್ ಮೃತದೇಹ ಮನೆ ಬಳಿಯ ದೇವಂದಬೆಟ್ಟು ಪರಿಸರದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದೆ. ಕೈ ತುಂಡಾಗಿ ದೂರಕ್ಕೆ ಬಿದ್ದಿದ್ದರೆ, ತಲೆಯ ಹಿಂಭಾಗ ಒಡೆದ ಸ್ಥಿತಿಯಲ್ಲಿ ದೇಹ ಮತ್ತೊಂದು ಕಡೆಗೆ ಬಿದ್ದಿತ್ತು.

ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಸ್ಥಳೀಯರ ಬಳಿ, ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಯಾರಾದ್ರೂ ರೈಲು ಹಳಿಗೆ ತಳ್ಳಿ ಕೊಲೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ದೊರಕಿಲ್ಲ. ಕೊಲೆ ಅಥವಾ ಆತ್ಮಹತ್ಯೆ ಸಾಧ್ಯತೆ ಇಲ್ಲ ಎನ್ನುತ್ತಾರೆ ಸ್ಥಳೀಯರು. ಕಾರ್ತಿಕ್ ಸಾಮಾನ್ಯವಾಗಿ ಮನೆ ಬಳಿಯಿರುವ ರೈಲು ಹಳಿಯಲ್ಲಿ ಸಂಜೆ ಹೊತ್ತಿಗೆ ಕುಳಿತುಕೊಳ್ಳುವ ಅಭ್ಯಾಸ ಇಟ್ಟುಕೊಂಡಿದ್ದ. ಕಿವಿಗೆ ಇಯರ್ ಫೋನ್ ಹಾಕ್ಕೊಂಡು ಮಾತಾಡುತ್ತಿದ್ದ ವೇಳೆ ರೈಲು ಬಂದು ಡಿಕ್ಕಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೇರವಾಗಿ ಹಳಿಗೆ ಬೀಳುತ್ತಿದ್ದರೆ ಶವ ಪೂರ್ತಿ ಛಿದ್ರ ಆಗುತ್ತಿತ್ತು. ಇಲ್ಲಿ ರೈಲು ಬಡಿದು ದೂರಕ್ಕೆ ಎಸೆಯಲ್ಪಟ್ಟ ರೀತಿ ಶವ ಕಂಡುಬಂದಿದ್ದು ಅಕಸ್ಮಾತ್ ಘಟನೆ ಸಂಭವಿಸಿದ ಬಗ್ಗೆ ಸಂಶಯ ಕಂಡುಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
The mortal remains of a youth was found on the railway track at Devandabettu here in the wee hours of Friday July 30. Suspicion behind the death is expressed by the family members of the deceased. The deceased has been identified as Karthik (25), son of Laxman of Kallige village.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm