ಬ್ರೇಕಿಂಗ್ ನ್ಯೂಸ್
30-07-21 10:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 30: ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಗಡಿಭಾಗದಲ್ಲಿ ತಪಾಸಣೆ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಇಂದು ಕೇರಳ ಗಡಿಭಾಗ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಗಡಿಭಾಗದಲ್ಲಿ ಕೇರಳ ಕಡೆಯಿಂದ ಬರುವ ಮಂದಿ ಬಗ್ಗೆ ತಪಾಸಣೆ ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.




ಈ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಕೇರಳ ಕಡೆಯಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಕ್ಕಾಗಿ ದಿನಂಪ್ರತಿ ಜನರು ಬರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ಗಡಿಭಾಗದಲ್ಲಿ ತಪಾಸಣೆ ನಡೆಸಲು ಆರೋಗ್ಯ ಕಾರ್ಯಕರ್ತರನ್ನು ಗಡಿಯಲ್ಲಿ ನೇಮಕ ಮಾಡಲಾಗಿದೆ. ಅದರ ಜೊತೆಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.
ಆದರೂ ಕೋವಿಡ್ ಲಸಿಕೆ ಒಂದು ಡೋಸ್ ಪಡೆದವರನ್ನು ಗಡಿಯಲ್ಲಿ ತಪಾಸಣೆ ನಡೆಸದೆ ಬಿಡಲಾಗುತ್ತಿದೆ. ಒಂದು ಡೋಸ್ ಪಡೆದವರಿಗೂ ಸೋಂಕು ಇರುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಬಗ್ಗೆ ಹೊಸತಾಗಿ ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ. ಅಲ್ಲದೆ, ಸದ್ಯಕ್ಕೆ ಗಡಿಭಾಗದಲ್ಲಿ ಕೋವಿಡ್ ತಪಾಸಣೆ ನಡೆಸಿ ಒಳಬಿಡಲು ಅನುಮತಿ ನೀಡಲಾಗಿದೆ. ಈ ವಿಚಾರದ ಬಗ್ಗೆಯೂ ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ. ಈ ಬಗ್ಗೆ ಯಾವ ರೀತಿಯ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಶನಿವಾರ ಜನಪ್ರತಿನಿಧಿಗಳ ಜೊತೆ ಸಭೆ ಇದ್ದು ಆನಂತರ ನಿರ್ಧಾರ ಪ್ರಕಟಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ನಡುವೆ 16 ಕಡೆಗಳಲ್ಲಿ ಒಳದಾರಿ ಸೇರಿದಂತೆ ಚೆಕ್ ಪೋಸ್ಟ್ ಹಾಕಿದ್ದು ಎಲ್ಲ ಕಡೆಯೂ ಪೊಲೀಸರು ಮತ್ತು ಆರೋಗ್ಯ ಇಲಾಖೆ ಕಾರ್ಯಕರ್ತರು ಇರಲಿದ್ದಾರೆ. ಕೋವಿಡ್ ಹರಡದಂತೆ, ಮುಂಜಾಗ್ರತೆ ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೇರಳದ ಗಡಿಭಾಗವನ್ನು ಮಂಗಳೂರು ಹಂಚಿಕೊಂಡಿರುವುದರಿಂದ ಜನರು ಕೂಡ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯ ಪಾಲನೆ ಮಾಡಬೇಕಿದೆ ಎಂದು ಇದೇ ವೇಳೆ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
As the districts in the state along Kerala border are witnessing a steady increase in the number of Covid-19 cases, Dakshina Kannada deputy commissioner (DC) Dr Rajendra K V and police commissioner N Shashi Kumar visited Talapady check post to review the Covid situation on Friday July 30.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am