ಬ್ರೇಕಿಂಗ್ ನ್ಯೂಸ್
31-07-21 09:51 pm Mangaluru Correspondent ಕರಾವಳಿ
ಮಂಜೇಶ್ವರ, ಜುಲೈ 31: ಬಂಟ್ವಾಳ ಬಳಿಯ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಬಳಿ ಚಾಲನೆ ಸ್ಥಿತಿಯಲ್ಲಿ ಬೈಕನ್ನು ಬಿಟ್ಟು ನದಿಗೆ ಹಾರಿದ್ದ ಯುವಕನ ಶವ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ದಾಸರಹಳ್ಳಿಯ ನಿವಾಸಿ ಸತ್ಯವೇಲು (28) ಎಂಬ ಯುವಕ ಜುಲೈ 28ರಂದು ರಾತ್ರಿ ಬಿ.ಸಿ.ರೋಡಿನ ಪಾಣೆಮಂಗಳೂರು ಸೇತುವೆ ಬಳಿಗೆ ಬೈಕಿನಲ್ಲಿ ಬಂದಿದ್ದು, ಬೈಕನ್ನು ಚಾಲನೆ ಸ್ಥಿತಿಯಲ್ಲೇ ಬಿಟ್ಟು ನದಿಗೆ ಹಾರಿದ್ದ ಎನ್ನಲಾಗಿತ್ತು. ಬಳಿಕ ಆತನ ಹುಡುಕಾಟ ನಡೆಸಿದ್ದರೂ, ಶವ ಸಿಕ್ಕಿರಲಿಲ್ಲ.
ಜುಲೈ 30ರಂದು ಮಂಜೇಶ್ವರ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಬಂಟ್ವಾಳ ಪೊಲೀಸರ ಮೂಲಕ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಬಂದು ಶವದ ಗುರುತು ಹಚ್ಚಿದ್ದಾರೆ. ಮಂಜೇಶ್ವರ ಪೊಲೀಸರು ಶವವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ದು ಪೋಸ್ಟ್ ಮಾರ್ಟಂ ನಡೆಸಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ಸತ್ಯವೇಲು ಇತ್ತೀಚೆಗೆ ಎರಡು ವಾರಗಳ ಹಿಂದೆಯೂ ಇದೇ ರೀತಿ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆನಂತರ ಸ್ಥಳೀಯರು ಗಮನಿಸಿ, ಆತನ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಕುಟುಂಬಸ್ಥರನ್ನು ಕರೆಸಿ, ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಜುಲೈ 28ರಂದು ಸತ್ಯವೇಲು ಬೆಂಗಳೂರಿನ ಮನೆಯನ್ನು ಬಿಟ್ಟು ಬಂದಿದ್ದ. ಈ ಬಗ್ಗೆ ಆತನ ತಾಯಿ ಪೊಲೀಸ್ ದೂರು ನೀಡಿದ್ದರು.
ಬೆಂಗಳೂರಿನ ಯುವಕ ನೇತ್ರಾವತಿ ನದಿಗೆ ಹಾರಿದ ಶಂಕೆ ; ಬಿ.ಸಿ.ರೋಡ್ ಸೇತುವೆಯಲ್ಲಿ ಬೈಕ್ ಪತ್ತೆ !
The mortal remains of the man who left his bike engine running and went missing from Netravati bridge at Panemangalore on July 28 morning, was found later at Manjeshwar Kanwatheertha sea shore. The person is identified as Sathyavelu (29), a resident of Dasarahalli in Bengaluru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am