ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am