ಬ್ರೇಕಿಂಗ್ ನ್ಯೂಸ್
06-08-21 02:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಾರಿ ಸಚಿವ ಸ್ಥಾನವೇ ಸಿಗಲ್ಲ ಎನ್ನಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಕೋಟರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ಕರಾವಳಿಯಲ್ಲಿ ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ವಿರೋಧ ಪಕ್ಷದ ಅಭಿಮಾನಿಗಳಿಗೂ ಖುಷಿಯಾಗಿದೆ. ಎಷ್ಟರಮಟ್ಟಿಗೆ ಅಂದರೆ, ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಬ್ಯಾನರ್ ಹಾಕಿ ಶುಭ ಹಾರೈಕೆ ಮಾಡಿದ್ದಾರೆ.
ಹೀಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿಯಲ್ಲಿ ಮಾತ್ರವಲ್ಲ. ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನುವಂತಾಗಿದೆ. ಹೆಬ್ರಿ ತಾಲೂಕಿನ ಶೇಡಿಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದೇ ನಮೂದಿಸಿ ಕೋಟ ಶ್ರೀನಿವಾಸ ಪೂಜಾರಿಗೆ ಶುಭಾಶಯ ಕೋರಿ ಬ್ಯಾನರ್ ಹಾಕಿದ್ದಾರೆ. ಸದ್ಯ ಈ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಎಷ್ಟೇ ಕಚ್ಚಾಡಿದರೂ ವಿರೋಧಿ ಪಕ್ಷಗಳ ರಾಜಕೀಯ ನಾಯಕರು ಪರಸ್ಪರ ಮುಖಾಮುಖಿಯಾದರೆ ಕುಶಲೋಪರಿ ಮಾತನಾಡಿ ಖುಷಿ ಪಡೋದನ್ನು ನೋಡಿದ್ದೇವೆ, ಆದರೆ ಕಾರ್ಯಕರ್ತರು ಮಾತ್ರ ಕಚ್ಚಾಡಿಕೊಂಡೇ ಇರ್ತಾರೆ. ಕೋಟ ಶ್ರೀನಿವಾಸರ ವಿಚಾರದಲ್ಲಿ ಮಾತ್ರ ಹಾಗಲ್ಲ, ಅನ್ಯ ಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ.
ಕೋಟ ಶ್ರೀನಿವಾಸ ಪೂಜಾರಿ ಇತರ ರಾಜಕಾರಣಿಗಳ ರೀತಿಯಲ್ಲ. ಅತ್ಯಂತ ಸರಳ ಜೀವಿಯೆಂದೇ ಹೆಸರು ಮಾಡಿರುವ ಪೂಜಾರಿ ಕಳೆದ ಬಾರಿ ಯಡಿಯೂರಪ್ಪ ಸರಕಾರದಲ್ಲಿ ಮುಜರಾಯಿ, ಮೀನುಗಾರಿಕೆ ಸಚಿವರಾಗಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈ ವೇಳೆ, ಪಕ್ಷ ಭೇದ ಇಲ್ಲದೆ ಯಾವುದೇ ಸಾಮಾನ್ಯ ಕಾರ್ಯಕರ್ತ ಭೇಟಿಗೆ ಬಂದರೂ ಅಹವಾಲು ಕೇಳುತ್ತಿದ್ದ ಪರಿ ಅವರನ್ನು ಜನಮಾನಸದಲ್ಲಿ ವಿನೀತ ಭಾವ ಸೃಷ್ಟಿಸಿದೆ. ಇದಕ್ಕಾಗಿಯೇ ಬಿಜೆಪಿ ಹೊರತಾಗಿಯೂ ಶ್ರೀನಿವಾಸ ಪೂಜಾರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.
Udupi Congress members place banners congratulating Kota Poojary for being appointed into Cabinet. Kota simplicity has gained huge fans even in congress party.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm