ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm