ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am