ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.



ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm