ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm